ಮಾದೇಗೌಡರ ವಿರುದ್ಧ ಮಾತು: ಮಾಜಿ ಸಂಸದ ಶಿವರಾಮೇಗೌಡರನ್ನು ಜೆಡಿಎಸ್‌ ನಿಂದ ಉಚ್ಛಾಟನೆಗೆ ಹೆಚ್‌.ಡಿ ಕುಮಾರಸ್ವಾಮಿ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಿವಂಗತ ಜಿ. ಮಾದೇಗೌಡರ ವಿರುದ್ಧ ಆಡಿಯೋ ವೈರಲ್​ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಂಸದ ಎಲ್‌.ಆರ್‌ ಶಿವರಾಮೇಗೌಡ ಮೇಲೆ ಗರಂ ಆಗಿರುವ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ, ಶಿವರಾಮೇಗೌಡರನ್ನ ಪಕ್ಷದಿಂದ ಉಚ್ಛಾಟಿಸಲು ಸೂಚನೆ ನೀಡಿದ್ದಾರೆ.
ಈ ಕುರಿತು ಜೆಡಿಎಸ್‌ ರಾಜ್ಯಾಧ್ಯಕ್ಷರಿಗೆ ಸೂಚನೆ ನೀಡಿರುವ ಕುಮಾರಸ್ವಾಮಿ, ಎಲ್.ಆರ್ ಶಿವರಾಮೇಗೌಡರಿಗೆ ನೋಟಿಸ್ ಕೊಟ್ಟು ಪಕ್ಷದಿಂದ ಹೊರ ಹೊರಹಾಕಿ ಎಂದಿದ್ದಾರೆ.
ಈ ಕುರಿತು ಜೆಡಿಸ್ ಪಕ್ಷದ ಕಚೇರಿ ಬಳಿ ಮಾತನಾಡಿದ ಕುಮಾರಸ್ವಾಮಿ, ಮಾಧ್ಯಮಗಳಲ್ಲಿ ನಿನ್ನೆ ವಿಡಿಯೋವೊಂದನ್ನು ನೋಡಿದ್ದೇನೆ, ಶಿವರಾಮೇಗೌಡರ ದೂರವಾಣಿ ರೆಕಾರ್ಡ್ ವೈರಲ್ ಆಗಿದೆ. ಮಂಡ್ಯ ಜಿಲ್ಲೆಯ ಹಿರಿಯ ರಾಜಕಾರಣಿ ದಿ.ಮಾದೇಗೌಡರ ಬಗ್ಗೆ ಮಾತನಾಡಿದ್ದಾರೆ. ವರ ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಈ ಸಂಬಂಧ ನಮ್ಮ ಅಧ್ಯಕ್ಷರಿಗೆ ಸೂಚನೆ ಕೊಡುತ್ತೇನೆ. ನೋಟಿಸ್ ಕೊಟ್ಟು ಪಕ್ಷದಿಂದ ಹೊರ ಹಾಕಲು ಸೂಚಿಸುತ್ತೇನೆ ಎಂದು ಹೇಳಿದರು.
ಆಡಿಯೋದಲ್ಲಿ ಶಾಸಕನಾಗೋದಕ್ಕೆ 30 ಕೋಟಿ ಖರ್ಚು ಮಾಡಿದ್ದೆ , ಜೊತೆಗೆ ಮಾದೇಗೌಡರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದೂ ಕೂಡ ಇದೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!