ಸಿಂಗಾಪೂರ್‌ನಲ್ಲಿದ್ದುಕೊಂಡೇ ಸರ್ಕಾರ ರಚಿಸೋಕೆ ಪ್ಲ್ಯಾನ್ ಮಾಡ್ತಿದ್ದಾರೆ ಎಚ್‌ಡಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆಯೇ ರಿಲ್ಯಾಕ್ಸ್ ಮೋಡ್‌ಗೆ ಜಾರಿದ ಎಚ್.ಡಿ. ಕುಮಾರಸ್ವಾಮಿ ಸಿಂಗಾಪುರದಲ್ಲಿದ್ದುಕೊಂಡೇ ಸರ್ಕಾರ ರಚಿಸೋಕೆ ಎಲ್ಲ ತಯಾರಿ ನಡೆಸಿದ್ದಾರೆ.

ಈ ಬಾರಿ ಅತಂತ್ರ ವಿಧಾನಸಭೆ ಸಾಧ್ಯತೆಗಳಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಸಂದರ್ಭ ಎದುರಾಗಬಹುದು.

ತಮ್ಮ ಪಕ್ಷದಲ್ಲಿ ಗೆಲ್ಲುವ ಅಭ್ಯರ್ಥಿಗಳ ಜೊತೆ ಸತತ ಸಂಪರ್ಕದಲ್ಲಿರುವ ಎಚ್‌ಡಿಕೆ ಯಾವುದೇ ಕಾರಣಕ್ಕೂ ಪಕ್ಷ ಬಿಡುವಂತಿಲ್ಲ ಎಂದು ಹೇಳಿದ್ದಾರೆ. ಈಗಾಗಲೇ ಕಾಂಗ್ರೆಸ್ ಜೆಡಿಎಸ್‌ನ ಗೆಲ್ಲುವ ಅಭ್ಯರ್ಥಿಗಳ ಜೊತೆ ಮಾತನಾಡಿದೆ, ಈ ಬಗ್ಗೆ ಎಚ್‌ಡಿಕೆ ಮಾತನಾಡಿದ್ದು, ಯಾವುದೇ ಆಮಿಷಗಳಿಗೆ ಕಿವಿಕೊಡಬೇಡಿ ಎಂದು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!