ಹನುಮ ಧ್ವಜ ತೆರವು, ಇದು ಕಾಂಗ್ರೆಸ್ ಸರ್ಕಾರದ ಉದ್ಧಟತನ ಎಂದ ಎಚ್‌ಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹನುಮಧ್ವಜ ತೆರವು ಕಾಂಗ್ರೆಸ್ ಸರ್ಕಾರದ ಉದ್ಧಟತನವನ್ನು ಎದ್ದು ತೋರಿಸುತ್ತಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ವಿವಾದಕ್ಕೆ ಸಂಬಂಧಿಸಿದ ಪಾದಯಾತ್ರೆಯಲ್ಲಿ ಎಚ್‌ಡಿಕೆ ಭಾಗಿಯಾಗಿದ್ದು, ಪೊಲೀಸರ ವಿರುದ್ಧ, ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಲಾಠಿ ಚಾರ್ಜ್ ಮಾಡಿದ್ದಾರೆ, ಒಬ್ಬ ವ್ಯಕ್ತಿ ಕಣ್ಣಿಗೆ ಏಟು ಬಿದ್ದಿದೆ. ಕಣ್ಣು ಹೋದ್ರೆ ಏನು ಮಾಡ್ತೀರಾ? ಮನಸಿಗೆ ಬಂದಿದ್ದು ಮಾಡ್ತಿದ್ದೀರಿ ಈ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತೂ ಚಿಂತೆ ಇಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!