ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಈಗಾಗಲೇ ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿ ದೃಢವಾಗಿದ್ದು, ಈ ಬಗ್ಗೆ ಚರ್ಚಿಸಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಲಿದ್ದಾರೆ.
ರಾಮನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಬಗ್ಗೆ ಚರ್ಚಿಸಲು ನಾನು ಸೆಪ್ಟೆಂಬರ್ 21 ರಂದು ದೆಹಲಿಗೆ ಹೋಗುತ್ತಿದ್ದೇನೆ. ಎಂದರು. ಇಷ್ಟೇ ಅಲ್ಲದೆ ಕಾವೇರಿ ನದಿ ನೀರು ಹಂಚಿಕೆ ವಿಷಯ ಸೇರಿದಂತೆ ಇತರ ವಿಷಯಗಳ ಬಗ್ಗೆಯೂ ಕೇಂದ್ರದ ನಾಯಕರೊಂದಿಗೆ ಚರ್ಚಿಸುವುದಾಗಿ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈಗಾಗಲೇ ರಾಜು ಸರಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಪ್ರತಿಭಟಿಸಿದ ಕುಮಾರಸ್ವಾಮಿ, ತಮಿಳುನಾಡಿನವರು ಸುಪ್ರೀಂ ಕೋರ್ಟ್ಗೆ ಹೋಗಿದ್ದಾರೆ ನಿರ್ಧಾರ ಬರಲಿ, ಅಲ್ಲಿಯವರೆಗೆ ನಾವು ಆತಂಕ ಪಡುವ ಅಗತ್ಯವಿಲ್ಲ. ಹಾಗೆಯೇ ನಾವು ಅವರಿಗೆ ನೀರು ಬಿಡುವ ಅಗತ್ಯವೂ ಇಲ್ಲ. ಕರ್ನಾಟಕ ಸರಕಾರವು ಈ ಕುರಿತು ದೃಢವಾದ ನಿಲುವು ತೆಗೆದುಕೊಳ್ಳಬೇಕು ಎಂದರು.