ಹೊಸ ದಿಗಂತ ವರದಿ, ಮಡಿಕೇರಿ:
ವ್ಯಕ್ತಿಯೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವೀರಾಜಪೇಟೆ ತಾಲೂಕಿನ ಮೈತಾಡಿ ಎಂಬಲ್ಲಿ ನಡೆದಿದೆ.
ಮೃತರನ್ನು ಮೈತಾಡಿ ಗ್ರಾಮದ ಕುಞಿರ ರಾಮು ಎಂಬವರ ಪುತ್ರ ಶರತ್ ಪೂವಯ್ಯ (33) ಎಂದು ಗುರುತಿಸಲಾಗಿದೆ.
ವಾಸದ ಮನೆಯ ಸಮೀಪದಲ್ಲೇ ಗುಂಡು ಹೊಡೆದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶರತ್ ಪೂವಯ್ಯ ಅವರ ಈ ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ. ವೀರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.