ಪತ್ನಿಯನ್ನು ಕೊಲೆಗೈದು ಎಸ್ಕೇಪ್ ಆಗಿದ್ದ ಆರೋಪಿ ಪತಿ ಅಂದರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಸ್ಕಾಂ ಇಂಜಿನಿಯರ್​ ಎಂದು ಹೇಳಿದ್ದ ಯುವಕನಿಗೆ ಕೈತುಂಬಾ ವರದಕ್ಷಿಣೆ ಕೊಟ್ಟು ಮಗಳನ್ನು ಮದುವೆ ಮಾಡಿಕೊಟ್ಟಿದ್ರು ಹೆತ್ತವರು. ಆದರೂ ವರದಕ್ಷಿಣೆ ಕಿರುಕುಳ ನೀಡಿ ಅಮಾನುಷವಾಗಿ ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಆರೋಪಿಯನ್ನು ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ಭೂಸಂದ್ರ ನಿವಾಸಿ ಕೃಷ್ಣಮೂರ್ತಿ(39) ಕೊಲೆಗೈದ ಆರೋಪಿ. ಈತನಿಗೆ ಕಳೆದ ಒಂದೂವರೆ ವರ್ಷದ ಹಿಂದೆ ಬೆಂಗಳೂರು ಉತ್ತರ ತಾಲೂಕು ತರಬನಹಳ್ಳಿ ನಿವಾಸಿ ಶೃತಿ ಅವರೊಂದಿಗೆ ಮದುವೆಯಾಗಿತ್ತು. ಮದುವೆಯಾದ ದಿನದಿಂದಲೂ ಒಂದು ದಿನವೂ ಈ ಜೋಡಿ ಸುಖ ಸಂಸಾರ ನಡೆಸಿರಲಿಲ್ಲ. ಕಳೆದ ನವೆಂಬರ್ 21 ರಂದು ಪತ್ನಿಯನ್ನು ಮಾರಕಾಸ್ತ್ರಗಳಿಂದ ಕೊಲೆಗೈದ ಪತಿ ಬಳಿಕ ಪರಾರಿಯಾಗಿದ್ದ.
ಕಳೆದ 10 ದಿನಗಳಿಂದ ತುಮಕೂರು ಹೊನ್ನಹಳ್ಳಿ ಗ್ರಾಮದಲ್ಲಿನ ಸಂಬಂಧಿಕರೊಬ್ಬರ ಮನೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಆರೋಪಿಯನ್ನು ಇದೀಗ ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!