ಪಂಚೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನ, ಪಂಚೆ ಹರಿದು ಕೆಳಗೆ ಬಿದ್ದು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೊಡ್ಡಬಳ್ಳಾಪುರದ ಭಗತ್‌ಸಿಂಗ್ ಕ್ರೀಡಾಂಗಣದ ಸಮೀಪದ ಮರಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಪಂಚೆಯಲ್ಲಿ ನೇಣು ಬಿಗಿದುಕೊಳ್ಳಲು ಯತ್ನಿಸಿದ್ದು, ಪಂಚೆ ಹರಿದು ಆತ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.

ಪಂಚೆಯನ್ನು ಹರಿದು, ಅದನ್ನೇ ಹಗ್ಗದ ರೀತಿ ಮರಕ್ಕೆ ಕಟ್ಟಿದ್ದಾನೆ. ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ, ಪಂಚೆ ಹರಿದು ಆತ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ. ಕೆಳಗೆ ಬಿದ್ದ ತಕ್ಷಣ ತಲೆಗೆ ಪೆಟ್ಟು ಬಿದ್ದು, ರಕ್ತಸ್ರಾವ ಆಗಿದೆ. ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!