ಚಿಕ್ಕಬಳ್ಳಾಪುರದಲ್ಲಿ ಸಾರ್ವಜನಿಕರ ಮೇಲೆ ತಲವಾರು ದಾಳಿ: ಆರೋಪಿ ಸೆರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೈಕ್ ನಲ್ಲಿ ಹೆಲ್ಮೆಟ್ ಧರಿಸಿ ಬಂದ ದುಷ್ಕರ್ಮಿಯೋರ್ವ ಸಿಕ್ಕವರ ಮೇಲೆ ತಲಾವರು ಬೀಸಿ ಆತಂಕದ ಸ್ಥಿತಿ ನಿರ್ಮಾಣ ಮಾಡಿದ ಘಟನೆ ಕಳೆದ‌ ರಾತ್ರಿ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು, ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಆರಫಪಿಯನ್ನು ಬಂಧಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ ಬಂಧಿತನನ್ನು ಅರ್ಜುನ್ ಎಂದು ಗುರುತಿಸಲಾಗಿದೆ.

ಈತ ಭಾನುವಾರ ರಾತ್ರಿ 10 ಗಂಟೆಯ ಸುಮಾರಿಗೆ ನಗರಸಭೆ, ಕಾರ್ಖಾನೆ ಪೇಟೆ, ಬಿಬಿ ರಸ್ತೆ, ಅಂಬಿಕಾ ಮೆಡಿಕಲ್ಸ್ ಮತ್ತಿತರ ಪ್ರದೇಶದಲ್ಲಿ ನಿಂತಿದ್ದ ಸುಮಾರು 15ಕ್ಕೂ ಹೆಚ್ಚು ಜನರ ಮೇಲೆ ತಲವಾರು ಬೀಸಿ ಪರಾರಿ ಆಗಿದ್ದ. ತಕ್ಷಣ ಕಾರ್ಯಪ್ರವೃತ್ತರಾದ ಚಿಕ್ಕಬಳ್ಳಾಪುರ ಪೊಲೀಸರು, ಆರೋಪಿಯನ್ನು ಚಿಕ್ಕಬಳ್ಳಾಪುರ ತಾಲೂಕಿನ ಕಳವಾರ ದೇವಸ್ಥಾನದ ಬಳಿ ಸಾಕ್ಷಿ ಸಮೇತ ಬಂಧಿಸಿದ್ದಾರೆ.

ತಲಾವಿನ ಏಟಿಗೆ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಬಂಧಿತನಿಂದ ಚಾಕು, ಮಚ್ಚು, ಲಾಂಗ್​ಗಳು, ಬೈಕ್ ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!