ಹೊಸದಿಗಂತ ವರದಿ, ಅಂಕೋಲಾ:
ಸ್ಕೂಟಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೋಟರ್ ಬೈಕ್ ಸವಾರ ಮೃತ ಪಟ್ಟ ಘಟನೆ ಪಟ್ಟಣದ ಹೊನ್ನಿಕೇರಿ ಕ್ರಾಸ್ ಬಳಿ ಸಂಭವಿಸಿದೆ.
ತಾಲೂಕಿನ ಬಡಗೇರಿ ನಿವಾಸಿ ವಾಸುದೇವ ಡಿಂಗಾ ಗೌಡ (27) ಮೃತ ದುರ್ದೈವಿಯಾಗಿದ್ದು ಸ್ಕೂಟಿ ಸವಾರ ನಾಗರಾಜ ಶಾಂಬಾ ಶೆಟ್ಟಿ ಎಂಬಾತ ಅತಿ ವೇಗ ಮತ್ತು ಅಜಾಗರೂಕತೆಯಿಂದ ಪಟ್ಟಣದಿಂದ ಬೆಲೇಕೇರಿ ಕಡೆ ಸವಾರಿ ಮಾಡಿಕೊಂಡು ಹೋಗುತ್ತಿದ್ದವ ಹೊನ್ನಿಕೇರಿ ಕ್ರಾಸ್ ಬಳಿ ಒಮ್ಮೆಲೇ ಬಲಕ್ಕೆ ತಿರುಗಿಸಿದ ಪರಿಣಾಮ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬೈಕ್ ಸವಾರ ಕೆಳಗೆ ಬಿದ್ದು ಬಲಕಾಲಿನ ಹೆಬ್ಬೆರಳಿಗೆ ಮತ್ತು ತಲೆಯ ಹಿಂಬದಿಗೆ ಗಂಭೀರ ಗಾಯಗೊಂಡು ಕಿವಿ ಮತ್ತು ಬಾಯಿಂದ ತೀವ್ರ ರಕ್ತಸ್ರಾವವಾಗಿರುವುದಾಗಿ ತಿಳಿದು ಬಂದಿದೆ.
ಗಾಯಾಳುವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲಕ್ಕೆ ಸಾಗಿಸುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯದಲ್ಲಿ ಭಟ್ಕಳ ಸಮೀಪ ಆತ ಮೃತ ಪಟ್ಟಿದ್ದು ಸ್ಕೂಟಿ ಸವಾರ ನಾಗರಾಜ ಶೆಟ್ಟಿ ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ