ಕ್ಯಾನ್ಸರ್ ನಿಯಂತ್ರಣಕ್ಕೆ ಹೊಸ ಯೋಜನೆಗೆ ಮುಂದಾದ ಆರೋಗ್ಯ ಇಲಾಖೆಗೆ ಆರಂಭದಲ್ಲೇ ʼಸಮಸ್ಯೆʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜಧಾನಿ ಸೇರಿದಂತೆ ಕರ್ನಾಟಕದಾದ್ಯಂತ ಕ್ಯಾನ್ಸರ್ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹೊಸ ಯೋಜನೆಗೆ ಮುಂದಾಗಿದ್ದು, ದುರದೃಷ್ಟವಶಾತ್ ಆರಂಭದಲ್ಲೇ ವಿಘ್ನ ಎದುರಾಗಿದೆ.

ಸದ್ಯ ಕಿದ್ವಾಯಿ ಹಾಗೂ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಮಾತ್ರ ಕೀಮೋ ಥೆರಪಿ ಮಾಡಲಾಗುತ್ತಿದ್ದು, ಈಗ ಆರೋಗ್ಯ ಇಲಾಖೆಯು ಮಲ್ಲೇಶ್ವರಂ ಕೆಸಿ ಜನರಲ್ ಆಸ್ಪತ್ರೆ, ಸಿವಿ ರಾಮನ್ ನಗರ ಆಸ್ಪತ್ರೆ, ಜಯನಗರ ಸಾರ್ವಜನಿಕರ ಆಸ್ಪತ್ರೆಯಲ್ಲಿ ಡೇ ಕೇರ್ ಕಿಮೋ ಥೆರಪಿ ಶುರುಮಾಡಲು ಮುಂದಾಗಿದೆ. ಆದರೆ, ಇಲಾಖೆಯ ಯೋಜನೆಗೆ ಆರಂಭದಲ್ಲೇ ವಿಘ್ನ ಎದುರಾಗಿದೆ.

ಬೆಂಗಳೂರನ ಎಲ್ಲಾ ಆಸ್ಪತ್ರೆಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಆಂಕಾಲಜಿಸ್ಟ್​ಗಳೇ ಇಲ್ಲ. ಕಿಮೋ ಥೆರಪಿ ನೀಡಲು ಆಂಕಾಲಜಿಸ್ಟ್​ಗಳ ಅವಶ್ಯಕತೆ ಇದೆ. ಕಿದ್ವಾಯಿಯಲ್ಲಿಯೇ 4 ಮೆಡಿಕಲ್ ಅಂಕಾಲಜಿಸ್ಟ್ ಸ್ಪೆಷಲಿಸ್ಟ್ ಕೊರತೆ ಇದೆ. ಕೆಸಿ ಜನರಲ್ ಸೇರಿದಂತೆ ಅನೇಕ ಕಡೆಗಳಲ್ಲಿ ವೈದ್ಯರೇ ಸಿಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಆಂಕಾಲಜಿಸ್ಟ್​ಗಳಿಗೆ ಬೇಡಿಕೆ ಹೆಚ್ಚಿದ ಕಾರಣ ಇದೀಗ ಆರೋಗ್ಯ ಇಲಾಖೆಗೆ ಆತಂಕ ಶುರುವಾಗಿದೆ.

ಡೇಕೇರ್ ಕೀಮೋ ಥೆರಪಿ ಆರಂಭ ಮಾಡಿ, ಚಿಕಿತ್ಸೆ ನೀಡಲು ವೈದ್ಯರೇ ಇಲ್ಲದಂತಾಗಿದೆ. ಸರ್ಕಾರಿ ಸೇರಿ ಖಾಸಗಿ ಆಸ್ಪತ್ರೆಗಳಲ್ಲೂ ಆಂಕಾಲಜಿಸ್ಟ್​ಗಳ ಕೊರತೆ ಎದುರಾಗಿದೆ ಕ್ಯಾನ್ಸರ್ ರೋಗಿಗಳಿಗೆ ಎಲ್ಲಿಲ್ಲದ ಸಮಸ್ಯೆಯಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಹೊಸ ಎಸ್​ಒಪಿ ಜಾರಿಗೊಳಿಸಲು ಚಿಂತನೆ ನಡೆಸುತ್ತಿದೆ ಎಂದು ಆರೋಗ್ಯ ಇಲಾಖೆ ಕಾರ್ಯದರ್ಶಿ ಹರ್ಷ ಗುಪ್ತಾ ತಿಳಿಸಿದ್ದಾರೆ.

ಪ್ರತಿ ವರ್ಷ ಭಾರತದಲ್ಲಿ ಸುಮಾರು 14 ಲಕ್ಷ ಹೊಸ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ. ಕರ್ನಾಟಕದಲ್ಲಿ ಕಳೆದ ವರ್ಷ 86563 ಹೊಸ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಪ್ರಮುಖವಾಗಿ, ಮಹಿಳೆಯರೇ ಹೆಚ್ಚಾಗಿ ಮಾರಕ‌ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ. ಕಳೆದ ವರ್ಷ ಬರೋಬ್ಬರಿ 47,957 ಮಹಿಳೆಯರಲ್ಲಿ ಹಾಗೂ 38,604 ಪುರುಷರಲ್ಲಿ‌ ಕ್ಯಾನ್ಸರ್ ಪತ್ತೆಯಾಗಿದೆ. ಇದರಲ್ಲಿ ಬೆಚ್ಚಿಬೀಳಿಸುವ ಸಂಗತಿಯೆಂದರೆ, ಬೆಂಗಳೂರಿನಲ್ಲೇ ಅತಿ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ವರದಿಯಾಗಿವೆ. ಅಂದಾಜು 14,630 ಪ್ರಕರಣಗಳು ವಾರ್ಷಿಕವಾಗಿ ದಾಖಲಾಗುತ್ತಿವೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!