ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೃದಯದ ಶಸ್ತ್ರಚಿಕಿತ್ಸೆಗಾಗಿ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಗುಣಮುಖರಾಗಿದ್ದು, ಭಾನುವಾರ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಅವರಿಗೆ ಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಮಾರ್ಗದರ್ಶನದಲ್ಲಿ ಹೃದ್ರೋಗ ತಜ್ಞರಾದ ಡಾ. ಸಾಯಿಸತೀಶ್, ಹಂಗೇರಿಯ ತಜ್ಞ ವೈದ್ಯ ಡಾ. ಗೀಜಾ ಗುರುವಾರ ಶಸ್ತ್ರ ಚಿಕಿತ್ಸೆ ನಡೆಸಿದ್ದರು. ಇದೀಗ ಕುಮಾರಸ್ವಾಮಿ ಸಂಪೂರ್ಣ ಚೇತರಿಸಿಕೊಂಡಿದ್ದು, ನಾಳೆ ಆಸ್ಪತ್ರೆಯಿಂದ ಬಿಡುಗಡೆಗೊಳ್ಳುತ್ತಿದ್ದಾರೆ.
ವೈದ್ಯರು ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದು, ಅದಾದ ಬಳಿಕ ಅವರು ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.