ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿಯಲ್ಲಿ ವಾತಾವರಣದ ಉಷ್ಣಾಂಶ ತೀವ್ರ ಏರಿಕೆಯಾಗುತ್ತಿದ್ದು, ಈ ನಡುವೆ ಕೆಲವಡೆಗಳಲ್ಲಿ ಹಟ್ ವೇವ್ಸ್ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ ಬಾರಿಯ ಉಷ್ಣಾಂಶ ದಾಖಲೆ ಬರೆಯುತ್ತಿದೆ. ಕಳೆದೊಂದು ವಾರದಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಇನ್ನಷ್ಟು ತೀವ್ರಗೊಂಡಿದೆ. ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಮೀರುವ ಸಾಧ್ಯತೆಗಳಿದ್ದು, ಜನರ ಆರೋಗ್ಯದ ಮೇಲೂ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ವಹಿಸುವಂತೆ ಇಲಾಖೆ ಸೂಚನೆ ನೀಡಿದೆ.
ಹೆಚ್ಚುತ್ತಿದೆ ಜ್ವರ, ಕೆಮ್ಮು
ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿರುವಂತೆಯೇ ಜ್ವರ, ಶೀತ, ಕೆಮ್ಮು ಮೊದಲಾದ ಕಾಯಿಲೆಗಳೂ ಹೆಚ್ಚಳವಾಗುತ್ತಿದ್ದು, ಹೊಸ ಆತಂಕ ಮೂಡಿಸಿದೆ. ಆಸ್ಪತ್ರೆಗಳಲ್ಲಿ ಜ್ವರದ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ನಾಗರಿಕರು ಅನಾವಶ್ಯಕ ಬಿಸಿಲಿಗೆ ಮೈಯೊಡ್ಡದೆ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಆರೋಗ್ಯ ಇಲಾಖೆಯೂ ಸೂಚನೆ ನೀಡಿದೆ.