ಹೊಸದಿಗಂತ ವರದಿ ಹುಬ್ಬಳ್ಳಿ:
ಇಲ್ಲಿಯ ಗೋಕುಲ ರಸ್ತೆಯಲ್ಲಿರುವ ಡಾಲಸ್೯ ಕಾಲೋನಿ ಹೋಟೆಲ್ ವೊಂದರಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರು ಬಂದು ಪ್ರತಿಭಟನೆ ನಡೆಸಿದರು.
ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ತೀವ್ರ ವಾಗ್ವಾದ ನಡೆಯಿತು. ಪರಸ್ಪರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಮಯದಲ್ಲಿ ಎರಡು ಪಕ್ಷದ ನಾಯಕರು ಕೈ ಕೈ ಮಿಲಾಯಿಸುವ ಮಟ್ಟಿಗೆ ಜಗಳ ನಡೆಯಿತು.
ಸ್ಥಳೀಯ ಪೊಲೀಸ್ ಎರಡು ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತ ನಿಯಂತ್ರಿಸಲು ಹರಸಾಹ ಪಟ್ಟರು. ಪರಸ್ಪರ ತಳಾಟ ಏರ್ಪಪಟ್ಟಿತ್ತು. ಕಾಂಗ್ರೆಸ್ ಕಾರ್ಯಕರ್ತರ ಗೋ ಬ್ಯಾಕ್ ಕುಮಾರಸ್ವಾಮಿ ಎಂದು ಘೋಷಣೆ ಕೂಗಿದರೇ, ಜಿಡಿಎಸ್ ಮುಖಂಡರು ಸರ್ಕಾರದ ವಿರೋಧ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.