ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಕೈ ಕಾರ್ಯಕರ್ತರಿಂದಲೇ ಭಾರೀ ವಿರೋಧ: ಎಲ್ಲೆಡೆ ಶಿವರಾಮ್‌ ವಿರೋಧಿ ಪೋಸ್ಟರ್ಸ್‌

ಹೊಸದಿಗಂತ ವರದಿ ಶಿರಸಿ :

ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಕಾಂಗ್ರೆಸ್ ಕಚೇರಿಯಲ್ಲೊ ಹೆಬ್ಬಾರ ವಿರೋಧಿ ಪೋಸ್ಟರ್ ಗಳನ್ನು ಅಂಟಿಸಲಾಗಿದೆ.
ಜಿಲ್ಲಾ ಕಾಂಗ್ರೆಸ್ ಕಚೇರಿಗೂ ಪೋಸ್ಟರ್ ಅಂಟಿಸಿ ವಿರೋಧ ವ್ಯಕ್ತಪಡಿಸಿದ ಕಾರ್ಯಕರ್ತರು, ನಮ್ಮ‌‌ ಪಕ್ಷ, ನಮ್ಮ ಹಕ್ಕು, ಭ್ರಷ್ಟರಿಗಿಲ್ಲಿ ಜಾಗವಿಲ್ಲ* ಎಂದು ಪೋಸ್ಟರ್ ಅಂಟಿಸಲಾಗಿದೆ.

ಕಾಂಗ್ರೆಸ್ ‌ನಿಂದ‌ ಬಾಂಬೆ ಟೀಂ ಜತೆ ಬಿಜೆಪಿಗೆ ಹೋಗಿ ಸಚಿವರಾಗಿದ್ದ ಹೆಬ್ಬಾರ್ ಈಗ ಮತ್ತೆ ಕೆಲವು ಅಸಮಾಧಾನದ ಕಾರಣ ಕಾಂಗ್ರೆಸ್ ಬಾಗಿಲು‌ ತಟ್ಟಿದ್ದರು. ಸಿಎಂ ಸಿದ್ದರಾಮಯ್ಯ ಬನವಾಸಿ ಕದಂಬೋತ್ಸವಕ್ಕೆ ಬಂದಾಗಲೂ ಸಿಂಎಗೆ ಭಾರೀ ಸ್ವಾಗತ ಕೋರಿದ್ದರು. ಆಗ ಕಾಂಗ್ರೆಸ್ ಸೇರ್ಪಡೆಗೆ ಸಚಿವ ಮಂಕಾಳ ವೈದ್ಯ, ಶಾಸಕ ಭೀಮಣ್ಣ ನಾಯ್ಕ ಸೇರಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿದ್ದರು.

ಲೋಕಸಭೆ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಉಪಸ್ಥಿತಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆಯಲಿದ್ದು, ಈ ಸಭೆಯ ಮುಂಚಿತವಾಗಿ ಹೆಬ್ಬಾರ್ ವಿರುದ್ಧ ಪೊಸ್ಟರ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!