ಹೊಸದಿಗಂತ ಡಿಜಿಟಲ್ ಡೆಸ್ಕ್:
ಮತ್ತೆ ಕರ್ನಾಟಕದಾದ್ಯಂತ ಮಳೆಚುರುಕಾಗಿದೆ. ಗುರುವಾರದಿಂದ ಹಲವೆಡೆ ಮಳೆಯಾಗಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದಿನಿಂದ ಮಳೆ ಜೋರಾಗಲಿದ್ದು, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಗದಗ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡು, ಉಡುಪಿ, ಉತ್ತರ ಕನ್ನಡ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ದಾವಣಗೆರೆ,ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
WEATHER | ರಾಜ್ಯಾದ್ಯಂತ ಭಾರೀ ಮಳೆ, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
