ದೇವನಹಳ್ಳಿ ಸುತ್ತ ಭಾರೀ ಮಳೆ: ಅಮಿತ್ ಶಾ ರೋಡ್ ಶೋ ಮುಂದೂಡಿಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯ ಚುನಾವಣಾ ಅಖಾಡಕ್ಕೆ ಕೇಂದ್ರ ಸಚಿವ ಅಮಿತ್ ಶಾ ಎಂಟ್ರಿಕೊಟ್ಟಿದ್ದು, ಇದರ ನಡುವೆ ಇಂದಿನ ರೋಡ್ ಶೋ ರದ್ದಾಗಿದೆ.
ಮಳೆ ಕಾರಣ ಕಾರ್ಯಕರ್ತರು ಬರಲು ಸಾಧ್ಯ ಆಗ್ತಿಲ್ಲ. ಹೀಗಾಗಿ ಕಾರ್ಯಕರ್ತರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕಾಗಿ ಇವತ್ತಿನ ಕಾರ್ಯಕ್ರಮ ಮುಂದೂಡಿದ್ದೇವೆ ಎಂದು ರಾಜ್ಯ ಚುನಾವಣಾ ಬಿಜೆಪಿ ಸಹ ಉಸ್ತುವಾರಿ ಅಣ್ಣಾಮಲೈ ಹೇಳಿದ್ದಾರೆ.

ಸದ್ಯ ಅಮಿತ್ ಶಾ ಅವರ ರೋಡ್ ಶೋ ಮಳೆಯ ಕಾರಣ ನಾಳೆಗೆ ಮುಂದೂಡಲಾಗಿದ್ದು, ನಾಳೆ ಬಿಜೆಪಿ ಅಭ್ಯರ್ಥಿ ಪಿಳ್ಳಮುನಿಶಾಮಪ್ಪ ಪರ ಪ್ರಚಾರ ನಡೆಸಲಿದ್ದಾರೆ. ಹೀಗಾಗಿ ಅಮಿತ್ ಶಾ ಇಂದು ಬೆಂಗಳೂರಿನಲ್ಲೇ ತಂಗಲಿದ್ದಾರೆವಿಮಾನ ನಿಲ್ದಾಣದಿಂದ ತಾಜ್ ಹೋಟೆಲ್ ನತ್ತ ಅಮಿತ್ ಶಾ ತೆರಳಿದ್ದಾರೆ. ಶಾ ಜೊತೆ ಕಾರಿನಲ್ಲಿ ಸಿಎಂ ಬೊಮ್ಮಾಯಿ ಸಾಥ್ ನೀಡಿದರು. ಅಮಿತ್ ಶಾ ಆಗಮನ ಮತ್ತು ರೋಡ್ ಶೋ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೊಬಸ್ತ್ ಕೈಗೊಳ್ಳಲಾಗಿದೆ. ಭದ್ರತೆಗಾಗಿ 500 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಅಮಿತ್ ಶಾ ರೋಡ್ ಶೋ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. 3.45 ರಿಂದ 5 ಗಂಟೆವರೆಗೂ ವಿಜಯಪುರ ಪಟ್ಟಣದಲ್ಲಿ ಬೃಹತ್ ರೋಡ್ ಶೋ ಗೆ ಸಮಯ ನಿಗದಿಯಾಗಿತ್ತು. ವಿಜಯಪುರ ಪಟ್ಟಣದ ಶಿವಗಣೇಶ ಸರ್ಕಲ್ ನಿಂದ ಟೋಲ್ ಗೇಟ್ ವರೆಗೂ ರೋಡ್ ಶೋ ಸುಮಾರು ಒಂದೂವರೆ ಕಿಮೀ ರೋಡ್ ಶೋ ನಡೆಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!