ಕುಂಭದ್ರೋಣ ಮಳೆಗೆ ಕಂಗಾಲಾದ ಕೊಡಗು: ಅಪಾಯದ ಮಟ್ಟದಲ್ಲಿ ಕಾವೇರಿ

ಹೊಸದಿಗಂತ ವರದಿ ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಕಳೆದ‌ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಅಲ್ಲಲ್ಲಿ ಭೂಕುಸಿತ, ಮರಗಳು ಧರೆಗುರುಳಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಹಲವೆಡೆ ಮರಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಮತ್ತೊಂದೆಡೆ ತಲಕಾವೇರಿಯ ಬ್ರಹ್ಮಗಿರಿ ಪರ್ವತ ಶ್ರೇಣಿಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ಕಾವೇರಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಮುಳುಗಡೆಯಾಗಿದ್ದು, ಭಾಗಮಂಡಲ-ನಾಪೋಕ್ಲು ರಸ್ತೆಯ ಮೇಲೆ ಕಾವೇರಿ ಉಕ್ಕಿ ಹರಿಯುತ್ತಿರುವುದರಿಂದ ಆ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಮೂರ್ನಾಡು ಸಮೀಪದ ಬಲಮುರಿಯ ಹಳೆ ಸೇತುವೆ ಮುಳುಗಡೆಯಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!