ಬೆಂಗಳೂರು ಸಹಿತ ರಾಜ್ಯದ ಹಲವೆಡೆ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಹಿನ್ನೆಲೆ ಬೆಂಗಳೂರು ಸಹಿತ ರಾಜ್ಯದ ಹಲವೆಡೆ 5 ದಿನ ಭಾರಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರದಲ್ಲಿ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡು, ಕರಾವಳಿಯಲ್ಲಿ ಮಳೆ ಆಗಲಿದೆ.
ಕೊಡಗು, ಚಾಮರಾಜನಗರ, ಮೈಸೂರು, ರಾಮನಗರ, ಮಂಡ್ಯ ವಿಜಯನಗರ, ಶಿವಮೊಗ್ಗ, ಹಾಸನ ತುಮಕೂರು, ಚಿಕ್ಕಮಗಳೂರು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಕೋಲಾರ, ಚಿಕ್ಕಬಳ್ಳಾಪು ಸೇರಿದಂತೆ 15 ಜಿಲ್ಲೆಗಳಿಗೆ ಮಳೆಯ ಅಲರ್ಟ್​​ ಘೋಷಿಸಿದೆ. ಉತ್ತರ ಒಳನಾಡಿನ 8 ಜಿಲ್ಲೆಗಳಲ್ಲಿ 3 ದಿನ ಮಳೆಯಾಗುವ ಸಂಭವವಿದೆ. ಮತ್ತು ಕರಾವಳಿ ಜಿಲ್ಲೆಗಳಲ್ಲಿ 2 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳಿಂದ ಮುನ್ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿಗೆ ಇಂದಿನಿಂದ ಮೂರು ದಿನ ಮಳೆ ಸಾಧ್ಯತೆಯಿದ್ದು, ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಮಳೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಕರಾವಾಳಿಗೆ ಇಂದಿನಿಂದ ಎರಡು ದಿನ ಮಳೆ ಇರಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇಂದು ಬೆಳಗಾವಿಯಲ್ಲಿ ಗಾಳಿ ಸಹಿತ ಮಳೆಯಾಗಿದ್ದು, ನಿರಂತರ ಒಂದು ಗಂಟೆಗಳ ಕಾಲ ಮಳೆಯಾಗಿದೆ. ಇತ್ತ ಹಾಸನ ಜಿಲ್ಲೆಯಲ್ಲೂ ಭಾರೀ ಮಳೆಯಾಗಿದ್ದು, ರೋಡ್ ಶೋ ನಡೆಸುತ್ತಿದ್ದ ಜೆಡಿಎಸ್​ ಕಾರ್ಯಕರ್ತರು ಮಳೆಯಲ್ಲಿ ಮಿಂದೆದ್ದರು. ಇನ್ನೊಂದೆಡೆ, ಗದಗ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಒಟ್ಟಾರೆಯಾಗಿ ಸುಡು ಬಿಸಿಲಿಗೆ ಬೆಂದಿದ್ದ ಈ ಮೂರು ಜಿಲ್ಲೆಗಳಲ್ಲಿನ ಜನರು ಮತ್ತು ಪರಿಸರವನ್ನು ವರುಣ ದೇವ ತಂಪರೆದಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!