ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ 6 ತಾಲೂಕಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು,ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್ಆರ್ ಪುರ ತಾಲೂಕಿನಲ್ಲಿ ರಜೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸುತ್ತೋಲೆ ಹೊರಡಿಸಿದ್ದಾರೆ.