ಬನವಾಸಿಯಲ್ಲಿ ಭಾರೀ ಮಳೆ ಹೆದ್ದಾರಿಗೆ ಅಡ್ಡಲಾಗಿ ಧರೆಗುರುಳಿದ ಮರ

ಹೊಸದಿಗಂತ ವರದಿ ಬನವಾಸಿ:
ಭಾರಿ ಗಾಳಿ ಮಳೆಯ ಪರಿಣಾಮ ಶಿರಸಿ-ಹೊಸನಗರ ರಾಜ್ಯ ಹೆದ್ದಾರಿಯ ಬನವಾಸಿ ಬಳಿ ಮಂಗಳವಾರ ಮುಂಜಾನೆ ಬೃಹತ್ ಗಾತ್ರದ ಮರ ವೊಂದು ಬುಡ ಸಮೇತ ಕಿತ್ತು ರಾಜ್ಯ ಹೆದ್ದಾರಿ ಮೇಲೆ ಬಿದ್ದುದರಿಂದ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಮೊಹರಂ ಪ್ರಯುಕ್ತ ಸರಕಾರಿ ರಜೆ ಇದ್ದುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದು, ರಸ್ತೆ ಬಂದ್ ಆದ ಕಾರಣ ತೆರಳುವ ಪ್ರವಾಸಿಗರು, ಪ್ರಯಾಣಿಕರು ಪರದಾಡುವಂತಾಯಿತು. ಮರ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ತುಂಡಾಗಿ ಬಿದ್ದು ವಿದ್ಯುತ್ ಸಂಚಾರ ಸ್ಥಗಿತಗೊಂಡಿತ್ತು. ಅರಣ್ಯ ಇಲಾಖೆ, ಪೋಲಿಸ್ ಇಲಾಖೆ ಹಾಗೂ ಗ್ರಾಮ ಪಂಚಾಯತಿಯವರು ಮರವನ್ನು ತೆರವು ಕಾರ್ಯ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!