ಬೆಂಗಳೂರಿನಲ್ಲಿ ಬೆಳ ಬೆಳಗ್ಗೆಯೇ ಜೋರು ಮಳೆ, ಆಫೀಸ್‌ ಹೋಗೋರಿಗೆ ಪರದಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಲಿಕಾನ್‌ ಸಿಟಿಯಲ್ಲಿ ಬೆಳಗ್ಗೆಯೇ ಮಳೆ ಸುರಿದಿದೆ. ಯಶವಂತಪುರ , ಮಹಾಲಕ್ಷ್ಮಿ ಲೇಔಟ್‌ ಸುತ್ತಮುತ್ತ ಮಳೆಯಾಗಿದೆ. ಮಳೆಗೆ ತಯಾರಾಗದೇ ಬಂದಿದ್ದ ಜನ ಹೈರಾಣಾಗಿದ್ದು, ಆಫೀಸಿಗೆ ಬೈಕ್‌ನಲ್ಲಿ ಹೋಗುವವರು ಪರದಾಡಿದ್ದಾರೆ.

ಒಡಿಶಾ ಕರಾವಳಿಯಲ್ಲಿ ಸೈಕ್ಲೋನ್ ಪರಿಣಾಮದಿಂದ ಬೆಂಗಳೂರು  ಸೇರಿದಂತೆ ರಾಜ್ಯದ ಕೆಲವೆಡೆ ಇಂದು ಮತ್ತು ನಾಳೆ ಸಹ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!