ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಕೆಎಆರ್‌ ಮಾರ್ಕೆಟ್‌ ಬೇಸ್‌ಮೆಂಟ್‌ನಲ್ಲಿ ನೂರಾರು ವಾಹನ ಜಲಾವೃತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕೆ.ಆರ್. ಮಾರುಕಟ್ಟೆಯ ನೆಲಮಾಳಿಗೆಯಲ್ಲಿ ನಿಲ್ಲಿಸಿದ್ದ 100 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸಂಪೂರ್ಣವಾಗಿ ಮುಳುಗಡೆಗೊಂಡಿವೆ.

ಈ ನಡುವೆ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ವಾಹನಗಳನ್ನು ತೆರವುಗೊಳಿಸಲು ಮುಂದಾದರು. ಪಂಪ್ ಗಳ ಮೂಲಕ ನೀರನ್ನು ಹೊರ ತೆಗೆಯುವ ಕಾರ್ಯ ಪ್ರಾರಂಭಿಸಿದರು.

ವಾಹನದ ಎಂಜಿನ್‌ಗಳಿಗೆ ನೀರು ನುಗ್ಗಿದ್ದು, ಸವಾರರು ವಾಹನಗಳ ಸ್ಟಾರ್ಟ್ ಮಾಡಲು ಕಷ್ಟಪಡುವಂತಾಗಿತ್ತು ಎಂದು ಕೆ.ಆರ್. ಮಾರುಕಟ್ಟೆಯ ಸಾಗರ್ ವೆಲ್‌ಫೇರ್ ಅಸೋಸಿಯೇಷನ್‌ನ ಅಧ್ಯಕ್ಷ ಆಸಿಫ್ ಪಾಷಾ ಹೇಳಿದ್ದಾರೆ.

ಈ ನಡುವೆ ಪ್ರವಾಹದಂತಹ ಪರಿಸ್ಥಿತಿಯಿಂದಾಗಿ ಕೆಲವು ವಸ್ತುಗಳು ಮಾರಾಟವಾಗದೆ ಉಳಿದಿದ್ದರಿಂದ ಮತ್ತು ಗ್ರಾಹಕರು ಖರೀದಿಯಿಂದ ಹಿಂದೆ ಸರಿದಿದ್ದರಿಂದ ತರಕಾರಿ ಮತ್ತು ಹಣ್ಣು ಮಾರಾಟಗಾರರು ಮಳೆಯನ್ನು ಬೈದುಕೊಂಡಿದ್ದಾರೆ. ಇನ್ನೂ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ ಸುರಿಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!