WEATHER | ಕರ್ನಾಟಕದ ಕರಾವಳಿಯಲ್ಲಿ ಮಳೆ ಜೋರು, ಉಳಿದೆಡೆ ಜಿಟಿಜಿಟಿ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕದ ಬಹುತೇಕ ಕಡೆ ಮುಂಗಾರು ಅಬ್ಬರ ಹೆಚ್ಚಿದೆ. ಇಂದಿನಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ಉಳಿದೆಡೆ ಸಾಧಾರಣ ಜಿಟಿಜಿಟಿ ಮಳೆಯಾಗುವ ಸಾಧ್ಯತೆ ಇದೆ.ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಬೆಳಗಾವಿ, ಹಾಸನ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್​​ನಲ್ಲಿ ಸಾಧಾರಣ ಮಳೆಯಾಗಲಿದೆ.

ಭಾಗಮಂಡಲ, ಗೇರುಸೊಪ್ಪ, ಆಗುಂಬೆ, ಸಿದ್ದಾಪುರದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಸುಳ್ಯ, ಕಾರ್ಕಳ, ಕೋಟಾ, ಧರ್ಮಸ್ಥಳ, ಬೆಳ್ತಂಗಡಿ, ಸಿದ್ದಾಪುರ, ಉಪ್ಪಿನಂಗಡಿ, ಕುಂದಾಪುರ, ಹೊನ್ನಾವರ, ಕ್ಯಾಸಲ್​​ರಾಕ್, ಉಡುಪಿ, ಮಾಣಿ, ಮಂಕಿ, ಕಮ್ಮರಡಿ, ನಾಪೋಕ್ಲು, ಜಯಪುರ, ಶೃಂಗೇರಿ, ಪೊನ್ನಂಪೇಟೆ, ಕೊಟ್ಟಿಗೆಹಾರ, ವಿರಾಜಪೇಟೆ, ಪುತ್ತೂರು, ಮಂಗಳೂರು, ಕುಮಟಾ, ಸೋಮವಾರಪೇಟೆಯಲ್ಲಿ ಮಳೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!