ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಪಂಜಿಕಲ್ಲು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಭೂಕುಸಿತ ಉಂಟಾಗಿದೆ.
ಗ್ರಾಮಸ್ಥರು ಹೆಚ್ಚಿನ ಮುಂಜಾಗ್ರತೆ ವಹಿಸಬೇಕು, ತಗ್ಗು ಪ್ರದೇಶ ಮತ್ತು ಎತ್ತರದ ಗುಡ್ಡದ ತಪ್ಪಲಿನ ಮನೆಗಳಲ್ಲಿರುವರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕು, ಅಪಾಯದ ಮುನ್ಸೂಚನೆ ದೊರೆತರೆ ತಕ್ಷಣ ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ.
ಮಂಗಳೂರು ನಗರ ಸಹಿತ ಹಲವೆಡೆಗಳಲ್ಲಿ ಅಪಾರ ಪ್ರಮಾಣದ ಹಾನಿಗಳು ವರದಿಯಾಗುತ್ತಿವೆ.