ಹೊಸದಿಗಂತ ವರದಿ, ಹಾವೇರಿ:
ಜಿಲ್ಲೆಯ ಅಲ್ಲಲ್ಲಿ ಸೋಮವಾರ ಸಂಜೆ ಗುಡುಗು, ಸಿಡಿಲು, ಮಿಂಚು ಸಹಿತ ಸುಮಾರು ಒಂದು ಗಂಟೆ ಕಾಲ ಧಾರಾಕಾರ ಮಳೆ ಸುರಿದಿದೆ.
ಜಿಲ್ಲೆಯ ಹಿರೇಕೆರೂರು ತಾಲೂಕಿನ ಡಮ್ಮಳ್ಳಿ ಗ್ರಾಮದಲ್ಲಿ ಸಿಡಿಲಿಗೆ ಎತ್ತುಗಳನ್ನ ಮೆಯಿಸಲು ಹೋಗಿದ್ದ ರೈತನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತ ರೈತನನ್ನು ಡಮ್ಮಳ್ಳಿ ಗ್ರಾಮದ ನಾಗಪ್ಪ ಕಣಸೋಗಿ (38) ಎಂದು ಗುರುತಿಸಲಾಗಿದೆ.
ಎತ್ತುಗಳನ್ನ ಮೆಯಿಸಲು ಹೋದಾಗ ಸಿಡಿಲು ಬಡಿದು ಸಾವನ್ನಪ್ಪಿದರು. ಘಟನಾ ಸ್ಥಳಕ್ಕೆ ಹಿರೇಕೆರೂರು ಶಾಸಕ ಯು.ಬಿ. ಬಣಕಾರ, ಹಾಗೂ ತಹಶಿಲ್ದಾರ ಪ್ರಭಾಕರ್ ಮತ್ತು ಹಿರೇಕೆರೂರು ಪೊಲೀಸರ ಭೇಟಿ ನೀಡಿ ಪರಶೀಲನೆ ನಡೆಸಿದರು. ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.