ಹೊಸದಿಗಂತ ಡಿಜಿಟಲ್ ಡೆಸ್ಕ್
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕಳೆದ ಮೂರು ದಿನಗಳಿಂದ ಗುಡುಗು ಸಹಿತ ಧಾರಾಕಾರ ಮಳೆಗೆ ರಾಜ್ಯಸಭಾ ಸದಸ್ಯ ಜಗ್ಗೇಶ್ ಮನೆ ಕೂಡ ಜಲಾವೃತಗೊಂಡಿದ್ದು, ಕುಟುಂಬ ಸದಸ್ಯರು ತೊಂದರೆಗೆ ಸಿಲುಕಿದ್ದಾರೆ.
ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಗ್ರಾಮದಲ್ಲಿರುವ ಜಗ್ಗೇಶ್ ಮನೆಗೆ ನೀರು ನುಗ್ಗಿದೆ. ಮಾಯಸಂದ್ರ ಜಗ್ಗೇಶ್ ಹುಟ್ಟೂರು. ಮಾಯಸಂದ್ರ ಗ್ರಾಮದ ಜಗ್ಗೇಶ್ ತೋಟದ ಮನೆಗೆ ನಿನ್ನೆ ರಾತ್ರಿ ಸುರಿದ ಮಳೆಯಿಂದ ಮನೆ ಜಲಾವೃತಗೊಂಡಿದೆ. ಮನೆಗೆ ನೀರು ನುಗ್ಗಿರುವುದರ ಬಗ್ಗೆ ಜಗ್ಗೇಶ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಮಾಯಸಂದ್ರದ ನನ್ನ ಮನೆ ಸಂಪೂರ್ಣ ಜಲಾವೃತ.. ಬಹುತೇಕರು ನೀರು ಹರಿವ ಸರ್ಕಾರದ ಜಾಗದಲ್ಲಿ ಮನೆಕಟ್ಟಿ ನೀರು ಹರಿಯುವ ಹೊಂಡಗಳ ಮುಚ್ಚಿದ್ದಾರೆ.ಮಾಯಸಂದ್ರ ತಳದಲ್ಲಿ ಇರುವ ಸುಮಾರು 20ಆಸ್ತಿಗಳಿಗೆ ನಿರಂತರ ನೀರು ನುಗ್ಗುತ್ತದೆ ದಯಮಾಡಿ ನೀರಾವರಿನಿಗಮ ಗಮನ ಹರಿಸಿ
ವಿನಂತಿ..#DC #TUMKUR#CEO #TUMKUR #ZP#KAVERINIGAMA #MD@BSBommai pic.twitter.com/IIaqptfxi4— ನವರಸನಾಯಕ ಜಗ್ಗೇಶ್ (@Jaggesh2) August 28, 2022
ಸಂಬಂಧಪಟ್ಟ ಅಧಿಕಾರಿಗಳು, ನೀರಾವರಿ ನಿಗಮದವರು ಗಮನ ಹರಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿದ್ದಾರೆ.ಬಹುತೇಕರು ನೀರು ಹರಿವ ಸರ್ಕಾರದ ಜಾಗದಲ್ಲಿ ಮನೆಕಟ್ಟಿ ನೀರು ಹರಿಯುವ ಹೊಂಡಗಳನ್ನು ಮುಚ್ಚಿದ್ದಾರೆ. ಮಾಯಸಂದ್ರ ತಳದಲ್ಲಿ ಇರುವ ಸುಮಾರು 20 ಆಸ್ತಿಗಳಿಗೆ ನಿರಂತರ ನೀರು ನುಗ್ಗುತ್ತಿದೆ. ದಯಮಾಡಿ ನೀರಾವರಿ ನಿಗಮ ಗಮನ ಹರಿಸಿ ಎಂದು ವಿನಂತಿಸಿದ್ದಾರೆ.