ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ಐದು ದಿನಗಳು ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಬಹುತೇಕ ಭಾಗ ಮಳೆಯ ಅಬ್ಬರಕ್ಕೆ ಸಿಲುಕಲಿದ್ದು, ಇಂದು ಮತ್ತು ನಾಳೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಕ್ಕೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ರಸ್ತೆಗುಂಡಿಗಳಲ್ಲಿ ನೀರು ತುಂಬಿದ್ದು, ವಾಹನ ಸವಾರರು ಸಂಚರಿಸಲು ಪರದಾಡುತ್ತಿದ್ದಾರೆ.