WEATHER | ಇನ್ನೆರಡು ದಿನದಲ್ಲಿ ಹೆಚ್ಚಾಗಲಿದೆ ಮಹಾಮಳೆ, ಯಾವ ಜಿಲ್ಲೆಗಳಿಗೆ ಸಂಕಷ್ಟ ನೋಡಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಇನ್ನೆರಡು ದಿನದಲ್ಲಿ  ಮಹಾಮಳೆ ಹೆಚ್ಚಾಗಲಿದ್ದು, ಯಾವ ಜಿಲ್ಲೆಗಳಿಗೆ ಸಂಕಷ್ಟ ನೋಡಿ..

ಕರಾವಳಿ ಹಾಗೂ ಮಲೆನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ಅದನ್ನು ಹೊರತುಪಡಿಸಿ ಉತ್ತರ ಒಳನಾಡಿನಲ್ಲೂ ಮಳೆ ಶುರುವಾಗಿದೆ. ಜುಲೈ 13ರಿಂದ ಮೂರು ದಿನಗಳ ಕಾಲ 13 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!