ಹೊಸದಿಗಂತ ವರದಿ, ಮಡಿಕೇರಿ
ಹಾರಂಗಿಯಲ್ಲಿ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಗಾಳಿ ಮಳೆಯೊಂದಿಗೆ ಭಾರೀ ಗಾತ್ರದ ಆಲಿಕಲ್ಲುಗಳು ಬಿದ್ದಿದ್ದು, ಹಲವು ಬಡ ಕುಟುಂಬಗಳ ಮನೆಗಳು ಜಖಂಗೊಂಡಿವೆ.
ರಾತ್ರಿ ದಿಢೀರನೆ ಭಾರಿ ಗಾಳಿಯೊಂದಿಗೆ ಮಳೆ ಶುರುವಾಗಿದ್ದು, ಸುಮಾರು 6 ಕೆ.ಜಿ. ಗಾತ್ರದ ಆಲಿಕಲ್ಲುಗಳು ಬಿದ್ದಿವೆ. ಆಲಿಕಲ್ಲುಗಳ ಭಾರಕ್ಕೆ ಹಲವು ಬಡ ಕುಟುಂಬಗಳ ಮನೆಗಳು ಹಾನಿಗೊಳಗಾಗಿವೆ.
ಸ್ಥಳಕ್ಕೆ ಭೇಟಿ ನೀಡಿದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭಾಸ್ಕರ್ ನಾಯ್ಕ ಅವರು ಪರಿಶೀಲನೆ ನಡೆಸಿದರು.
ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಸುಮಾರು 50-60 ವರ್ಷಗಳಿಂದ 270 ಕ್ಕೂ ಅಧಿಕ ಬಡಕುಟುಂಬಗಳು ಇಲ್ಲಿ ವಾಸವಿದ್ದು, ಹಕ್ಕುಪತ್ರ ದೊರಕದೇ ಇರುವುದರಿಂದ ಗಾಳಿ-ಮಳೆಗಳಿಂದ ಉಂಟಾಗುವ ನಷ್ಟಕ್ಕೆ ಸರ್ಕಾರದಿಂದ ಯಾವುದೇ ಪರಿಹಾರ ಸಿಗುತ್ತಿಲ್ಲ. ಇದರಿಂದಾಗಿ ಹಲವು ಬಡ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ ಎಂದರು.
ಈ ಕುರಿತು ಕೂಡಲೇ ಗಮನ ಹರಿಸಿ ನೊಂದ ಬಡಕುಟುಂಬಗಳಿಗೆ ನೆರವಾಗಬೇಕೆಂದು ಗ್ರಾಮಸ್ಥರ ಪರವಾಗಿ ಜಿಲ್ಲಾಡಳಿತವನ್ನು ಅವರು ಒತ್ತಾಯಿಸಿದ್ದಾರೆ.
ಸ್ಥಳದಲ್ಲಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಶರತ್ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ