ಉತ್ತರಾಖಂಡದಲ್ಲಿ ಭಾರೀ ಮಳೆಗೆ ಭೂಕುಸಿತ: ಬದರಿನಾಥ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಉತ್ತರಾಖಂಡದಲ್ಲಿ ಭಾರೀ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಭೂಕುಸಿತ ಸಂಭವಿಸಿದ್ದು, ಸುಮಾರು 6 ಕಿ.ಮೀ ಟ್ರಾಫಿಕ್‌ ಜಾಮ್‌ ಉಂಟಾಗಿದೆ.

ಭಾರೀ ಮಳೆಯಿಂದಾಗಿ ಅಲಕನಂದಾ ನದಿಯ ದಡದಲ್ಲಿರುವ ಧಾರಿ ದೇವಿ ದೇವಸ್ಥಾನದಿಂದ ಆರು ಕಿ.ಮೀ. ದೂರದಲ್ಲಿರುವ ಖಾಂಕ್ರದವರೆಗೆ ಸಾಗುವ ಬದರಿನಾಥ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.ಈ ಹೆದ್ದಾರಿ ಯಾತ್ರಾ ಸ್ಥಳಗಳಾದ ಋಷಿಕೇಶ, ದೇವಪ್ರಯಾಗ, ರುದ್ರಪ್ರಯಾಗ, ಕರ್ಣಪ್ರಯಾಗ, ಚಮೋಲಿ, ಜೋಶಿಮಠ ಮತ್ತು ಬದರಿನಾಥವನ್ನು ಸಂಪರ್ಕಿಸುತ್ತದೆ.

ಕಾರುಗಳು, ಫೋರ್ಸ್ ಟ್ರಾವೆಲರ್‌ಗಳು, ಟ್ರಕ್‌ಗಳು ಸಾಲುಗಟ್ಟಿ ನಿಂತಿದ್ದು, ನಿಧಾನಗತಿಯಲ್ಲಿ ಸಾಗುತ್ತಿವೆ. ಕೆಲವೆಡೆ ಭೂಕುಸಿತ ಸಂಭವಿಸಿದ ಜಾಗಗಳಲ್ಲಿ ಜೆಸಿಬಿಗಳ ಮೂಲಕ ತೆರವುಗೊಳಿಸುವ ಕೆಲಸ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!