ಚಿಕ್ಕಮಗಳೂರಿನಲ್ಲಿ ಮುಂದುವರಿದ ಭಾರೀ ಮಳೆ: ಅಂಗನವಾಡಿ ಮಕ್ಕಳಿಗೆ ರಜೆ

ಹೊಸದಿಗಂತ ವರದಿ ಚಿಕ್ಕಮಗಳೂರು:

ಮಳೆ ಮುಂದುವರಿದ ಹಿನ್ನೆಯಲ್ಲಿ ಜಿಲ್ಲೆಯ ಮಲೆನಾಡು ಭಾಗದ 5 ತಾಲೂಕಿನ ಅಂಗನವಾಡಿಗಳಿಗೆ ಜಿಲ್ಲಾಧಿಕಾರಿ ಮೀನಾ ನಾಗರಜ್ ರಜೆ ಘೋಷಿಸಿದ್ದಾರೆ.

ಎನ್.ಆರ್.ಪುರ, ಕೊಪ್ಪ, ಶೃಂಗೇರಿ, ಕಳಸ‌ ಹಾಗೂ ಮೂಡಿಗೆರೆ ತಾಲೂಕಿನ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ.

ಭಾರೀ ಮಳೆಯಿಂದಾಗಿ ಶೃಂಗೇರಿಯ ನೆಮ್ಮಾರ್ ಬಳಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಗುಡ್ಡ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.
ನಿನ್ನೆ ಗುಡ್ಡ ಕುಸಿದ ಕಾರಣಕ್ಕೆ ಈಗಾಗಲೆ ಶೃಂಗೇರಿ-ಕಾರ್ಕಳ ರಸ್ತೆಯನ್ನು ಜಿಲ್ಲಾಡಳಿತ ಬಂದ್ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!