ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ತುಮಕೂರು, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬರಗಿ, ಗದಗ, ಬೀದರ್, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಧಾರವಾಡ, ಹಾವೇರಿ,ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಕಕ್ಕೇರಿ, ಲಿಂಗಸುಗೂರು, ಇಳಕಲ್, ಹುಣಸಗಿಯಲ್ಲಿ ಭಾರಿ ಮಳೆಯಾಗಿದೆ. ಆಳಂದ, ಯಲಬುರ್ಗಾ, ಶೋರಾಪುರ, ಮಸ್ಕಿ, ಹುನಗುಂದ, ಗೌರಿಬಿದನೂರು, ತಾವರಗೇರಾ, ಶಿರಗುಪ್ಪ, ನಾರಾಯಣಪುರ, ಕೂಡಲಸಂಗಮ, ಕಾರವಾರ, ಶಾಹಪುರ, ನೆಲೋಗಿ, ನಲ್ವತವಾಡ, ಕುಷ್ಟಗಿಯಲ್ಲಿ ಮಳೆಯಾಗಿದೆ.
WEATHER |ರಾಜ್ಯದ 19 ಜಿಲ್ಲೆಗಳಲ್ಲಿ ಮುಂದಿನ 3 ದಿನ ಧಾರಾಕಾರ ಮಳೆ
