ಹೊಸದಿಗಂತ ಡಿಜಿಟಲ್ ಡೆಸ್ಕ್ :
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಈ ಹಿನ್ನೆಲೆ ತಾಲೂಕಿನ ಕೆಲವು ಶಾಲಾ ಕಾಲೇಜುಗಳಿಗೆ ನಾಳೆ(ಜುಲೈ 7) ರಜೆ ಘೋಷಣೆ ಮಾಡಲಾಗಿದೆ.
ಜಾಗರ, ಆವತಿ, ವಸ್ತಾರೆ, ಖಾಂಡ್ಯ, ಆಲ್ದೂರು ಹೋಬಳಿ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಧಿಕೃತ ಮಾಹಿತಿ ನೀಡಿದ್ದಾರೆ.
ಮಳೆಯಲ್ಲಿ ಮಕ್ಕಳು ಶಾಲೆಗೆ ತೊಂದರೆಯಾಗುತ್ತಿರುವ ಹಿನ್ನೆಲೆ ಮಕ್ಕಳ ಸುರಕ್ಷತೆ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ರಜೆ ನೀಡಲಾಗಿದೆ., ಕೊಪ್ಪ, ಶೃಂಗೇರಿ, ಎನ್ ಆರ್ ಪುರದಲ್ಲಿ ಭಾರಿ ಮಳೆಯಾಗುತ್ತಿದೆ. ಹಲವು ಕಡೆ ನದಿ ಹಳ್ಳಗಳು ತುಂಬಿ ತುಳುಕುತ್ತಿದೆ.