ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 14ರವರೆಗೂ ಭಾರಿ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ,ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕ್ಯಾಸಲ್ರಾಕ್, ಮಂಕಿ, ಭಾಗಮಂಡಲ, ಕಮ್ಮರಡಿ, ಯಲ್ಲಾಪುರ, ಮಾಣಿ, ಆಗುಂಬೆ, ಶೃಂಗೇರಿ, ಬಂಟವಾಳ, ಪುತ್ತೂರು, ಬೆಳ್ತಂಗಡಿ, ಕಾರ್ಕಳ, ಮೂಡುಬಿದಿರೆ, ಧರ್ಮಸ್ಥಳ, ಸುಳ್ಯ, ಕದ್ರಾ, ಜೋಯ್ಡಾ, ಸಿದ್ದಾಪುರ, ಶಿರಾಲಿ, ಹೊನ್ನಾವರ, ಕೊಟ್ಟಿಗೆಹಾರ, ಸೋಮವಾರಪೇಟೆ, ಖಾನಾಪುರ, ಹುಂಚದಕಟ್ಟೆ, ಕೊಪ್ಪ, ಗೋಕರ್ಣ, ನಾಪೋಕ್ಲು, ವಿರಾಜಪೇಟೆ, ಹಳಿಯಾಳ, ಬಾಳೆಹೊನ್ನೂರು, ಕಳಸ, ತ್ಯಾಗರ್ತಿ, ಬಂಡೀಪುರ, ಬನವಾಸಿ, ಅಂಕೋಲಾ, ಉಡುಪಿ, ಮುಲ್ಕಿ, ಮುಂಡಗೋಡು, ನಿಪ್ಪಾಣಿಯಲ್ಲಿ ಮಳೆಯಾಗಿದೆ.