ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಗೆ ಕುಸಿಯಿತು ರಸ್ತೆ: ವಾಹನ ಸಂಚಾರಕ್ಕೆ ಅಡಚಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಳೆದ ಕೆಲವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಎಡಪದವು-ಕುಪ್ಪೆಪದವು-ಬಂಟ್ವಾಳ ರಾಜ್ಯ ಹೆದ್ದಾರಿಯ ಮುತ್ತೂರು ನೂದೋಟ್ಟು ಎಂಬಲ್ಲಿ ರಸ್ತೆ ಕುಸಿದು ಹೋಗಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಹೆದಾರಿಯಲ್ಲಿ ಅಂದಾಜು 60 ಮೀಟರ್ ಉದ್ದಕ್ಕೆ ರಸ್ತೆ ಸುಮಾರು 2 ಅಡಿ ಒಳಭಾಗಕ್ಕೆ ಕುಸಿದಿದ್ದು ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ ರಸ್ತೆ ಸಂಪೂರ್ಣವಾಗಿ ಕುಸಿದರೆ ಬಂಟ್ವಾಳ ಮತ್ತು ಕುಪ್ಪೆಪದವು ನಡುವೆ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳಲಿದೆ.
ನಿರಂತರ ಮಳೆಯಿಂದ ರಸ್ತೆಯ ಅಡಿಭಾಗದಲ್ಲಿ ನೀರಿನ ಒರತೆ ಹೆಚ್ಚಾಗಿದ್ದು ಅಲ್ಲದೇ ಮಂಗಳೂರು-ಬೆಂಗಳೂರು ಹೆದ್ದಾರಿ ಕಾಮಗಾರಿಗೆ ಎಡಪದವು ಸಮೀಪದ ಕೊರ್ಡೇಲ್ ಎಂಬಲ್ಲಿಂದ ಜಲ್ಲಿ ಸಾಗಿಸುವ ಬೃಹತ್ ವಾಹನಗಳ ಸಂಚಾರದಿಂದ ಇಲ್ಲಿ ರಸ್ತೆ ಕುಸಿಯಲು ಕಾರಣ ಎಂದು ಸ್ಥಳೀಯರು ಆರೋಪಿಸಿದ್ದು, ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಮಾಡುವಂತೆ ರಾಜ್ಯ ಹೆದ್ದಾರಿ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ನಿರ್ಲಕ್ಷ್ಯ ವಹಿಲಾಗಿದೆ ಎಂದು ಆರೋಪ ಕೇಳಿಬಂದಿದೆ. ಹೆದ್ದಾರಿ ಇಲಾಖೆಯ ನಿರ್ಲಕ್ಷ ಖಂಡಿಸಿ ಹೆದ್ದಾರಿ ತಡೆಗೆ ಸ್ಥಳೀಯರು ತಯಾರಿ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!