ಕೇರಳದಲ್ಲಿ ಭಾರೀ ಮಳೆ: 8 ಜಿಲ್ಲೆಗಳಿಗೆ ರೆಡ್‌ ಅಲರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಕೇರಳದ ಎಂಟು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ನದಿಗಳು ಉಕ್ಕಿ ಹರಿದು ಸುತ್ತಮುತ್ತಲಿನ ಪ್ರದೇಶಗಳಿಗೆ ನೀರು ನುಗ್ಗಿರುವ ಕಾರಣ ಅನೇಕ ಜನರು ಮನೆಗಳಿಂದ ಸ್ಥಳಾಂತರಗೊಂಡಿದ್ದಾರೆ.

ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ಕಣ್ಣೂರಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಹಳದಿ ಅಲರ್ಟ್ ಜಾರಿಯಲ್ಲಿರುವ ತಿರುವನಂತಪುರಂ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಅತಿ ಉದ್ದದ ನದಿಯಾದ ಪೆರಿಯಾರ್ ಉಕ್ಕಿ ಹರಿದು ಸುತ್ತಮುತ್ತಲಿನ ಗ್ರಾಮಗಳಿಗೆ ನೀರು ನುಗ್ಗಿದೆ. ನಿರಂತರ ಮಳೆಯಿಂದಾಗಿ ಚಾಲಕುಡಿ, ಪಂಪಾ, ಮಣಿಮಾಲಾ ಮತ್ತು ಅಚನ್‌ಕೋವಿಲ್ ಸೇರಿದಂತೆ ಇತರ ನದಿಗಳು ಅಪಾಯದ ಮಟ್ಟವನ್ನು ಸಮೀಪಿಸುತ್ತಿವೆ.  ನದಿ ಪಾತ್ರದಲ್ಲಿನ ಜನರು ಸ್ಥಳಾಂತರಗೊಳ್ಳುವಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!