ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಗಾರು ಆರಂಭಕ್ಕೂ ಮೊದಲೇ ವರ್ಷಧಾರೆಯಾಗುತ್ತಿದ್ದು , ಮಧ್ಯಾಹ್ನ ಕೆಲ ಕಾಲ ನಗರದ ಹಲವೆಡೆ ಮಳೆಯಾಯಿತು.
ಏಕಾಏಕಿ ಮಳೆ ಸುರಿದ ಹಿನ್ನೆಲೆಯಲ್ಲಿ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡಬೇಕಾಯಿತು.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ ಸೇರಿದಂತೆ ರಾಜ್ಯದ ಕೆಲವು ಕಡೆ ಭಾರೀ ಮಳೆಯಾಗಲಿದೆ. ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮಳೆ ಮುನ್ಸೂಚನೆ ನೀಡದ ಬೆನ್ನಲ್ಲೇ ಬೆಂಗಳೂರು ನಗರದಲ್ಲಿ ಮಧ್ಯಾಹ್ನ ಭಾರಿ ಮಳೆಯಾಯಿತು.
ಮೆಜೆಸ್ಟಿಕ್, ಮಲ್ಲೇಶ್ವರ, ಜಯನಗರ, ಬಸವನಗುಡಿ, ವಿಜಯನಗರ, ದೀಪಾಂಜಲಿನಗರ, ಹೊಸಹಳ್ಳಿ, ಅತ್ತಿಗುಪ್ಪೆ ಸುತ್ತಮುತ್ತ ಗುಡುಗು ಸಹಿತ ಧಾರಾಕಾರವಾಗಿ ಮಳೆ ಸುರಿಯಿತು. ಮಳೆ ಹಿನ್ನೆಲೆಯಲ್ಲಿ ಪ್ರಯಾಣಿಕರು, ವಾಹನ ಸಾವರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು. ಅಲ್ಲಲ್ಲಿ ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪ್ರಯಾಸಪಡಬೇಕಾಯಿತು.