ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆ ಸುರಿದಿದ್ದು, ಸುಡು ಬಿಸಿಲಿನಲ್ಲಿ ತತ್ತರಿಸಿರುವ ಜನತೆ ವರುಣನ ಆಗಮನದಿಂದ ಸಂತಸ ಪಡುತ್ತಿದ್ದಾರೆ.
ಇದೇ ವೇಳೆ ವಿಜಯಪುರ ತಾಲೂಕಿನ ತಿಕೋಟ ಗ್ರಾಮದಲ್ಲಿ ಮಳೆ ಸುರಿದಿದ್ದು, ಇಂಡಿ ತಾಲೂಕಿನ ಮಾವಿನಹಳ್ಳಿಯಲ್ಲಿ ಸಿಡಿಲು ಬಡಿದು ಬಾಲಕ ಮೃತಪಟ್ಟಿದ್ದಾನೆ.
ಬೀರಪ್ಪ ನಿಂಗಪ್ಪ ಅವರಾದಿ (16) ಮೃತ ಬಾಲಕ. ಮೃತ ಬಾಲಕನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.