ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರೀ ಮಳೆಯಿಂದಾಗಿ ತಮಿಳುನಾಡು ತತ್ತರಿಸಿಹೋಗಿದೆ. ಮನೆ-ಮಠ, ಪ್ರೀತಿಪಾತ್ರರು ಎಲ್ಲವನ್ನೂ ಜನರು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ರಾಜಧಾನಿ ಚೆನ್ನೈ ಸೇರಿದಂತೆ ಹಲವೆಡೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇದೀಗ ತಮಿಳುನಾಡಿನ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಿಂಚೌಂಗ್ ಚಂಡಮಾರುತದ ಅಬ್ಬರಕ್ಕೆ ತಮಿಳುನಾಡು ತತ್ತರಿಸಿಹೋಗಿತ್ತು. ಲಕ್ಷಾಂತರ ಮಂದಿ ಜೀವನ ಕಳೆದುಕೊಂಡಿದ್ದರು. ಮಿಂಚೌಂಗ್ ಅಬ್ಬರ ಕಡಿಮೆಯಾದಂತೆ ಇದೀಗ ಮತ್ತೆ ಮಳೆ ಹೆಚ್ಚಾಗಿದೆ.
ತಿರುನೆಲ್ವಿ ಪ್ರದೇಶ ಸಂಪೂರ್ಣ ಮುಳುಗಡೆಯಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡು ದಿನಗಳಿಂದ ಸುರಿದ ಮಳೆಗೆ ಜನ ಹೈರಾಣಾಗಿದೆ. ತೂತುಕುಡಿ, ಕನ್ಯಾಕುಮಾರಿ ಸೇರಿ ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿದೆ. ಮನೆಗಳಿಗೆ ನೀರು ನುಗ್ಗಿ ಮನೆಯಿಂದ ಹೊರಬರಲಾಗದೆ ಜನ ಒದ್ದಾಡುತ್ತಿದ್ದಾರೆ. ಎನ್ಡಿಆರ್ಎಫ್ ಸಿಬ್ಬಂದಿ ರಕ್ಷಣಾ ಕಾರ್ಯ ನಡೆಸುತ್ತಲೇ ಇದ್ದು, ಜನರ ಪ್ರಾಣ ಉಳಿಸುತ್ತಿದ್ದಾರೆ.
ತಿರುನಲ್ವೇಲಿ, ತೂತುಕುಡಿ, ಕನ್ಯಾಕುಮಾರಿ, ತೆಂಕಶಿ ಜಿಲ್ಲೆಗಳಲ್ಲ ಅತಿಯಾಗಿ ಮಳೆಯಾಗಿದೆ. ಇದರಿಂದಾಗಿ ಶಾಲಾ ಕಾಲೇಜುಗಳು, ಖಾಸಗಿ ಸಂಸ್ಥೆಗಳು, ಬ್ಯಾಂಕ್ಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.