ರಾಜ್ಯದಲ್ಲಿ ತಗ್ಗಿದ ಮಳೆ ಅಬ್ಬರ, ಇಂದು ವಿಪರೀತ ಚಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಇನ್ನು ಬೆಂಗಳೂರಿನಲ್ಲಿ ಇಂದು ವಿಪರೀತ ಚಳಿ ಇರಲಿದೆ. ಇಂದು ಮುಂಜಾನೆಯಿಂದಲೇ ರಾಜಧಾನಿ ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿದ್ದು, ಇದು ಹೀಗೇ ಮುಂದುವರಿಯುವ ಸಾಧ್ಯತೆ ಇದೆ. ಇಂದು ಮಾತ್ರ ಚಳಿಯ ವಾತಾವರಣವಿರಲಿದ್ದು, ನಾಳೆ ಸಹಜ ಸ್ಥಿತಿಗೆ ಬರಲಿದೆ.

ಹಿಂಗಾರು ಮಳೆಗಾಲದಲ್ಲಿ ಚಳಿ ಕಮ್ಮಿ ಹಾಗೂ ಮಬ್ಬು ವಾತಾವರಣವೂ ಕಡಿಮೆ ಇರುತ್ತದೆ. ಆದರೆ ಈ ಬಾರೀ ಹವಾಮಾನ ವೈಪರೀತ್ಯದಿಂದಾಗಿ ಮಳೆಯ ಜೊತೆ ಚಳಿಗಾಳಿಯೂ ಆವರಿಸಿದೆ.

ಕಳೆದ ವಾರದಲ್ಲಿ ವಾಯುಭಾರ ಕುಸಿತ ಸಂಭವಿಸಿದ್ದು, ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾದ ವಾಯುಭಾರ ಕುಸಿತ ಪುದುಚೇರಿ ಮಾರ್ಗವಾಗಿ ಅರಬ್ಬಿ ಸಮುದ್ರದಲ್ಲಿ ಕೊನೆಗೊಂಡಿತ್ತು. ಇದರಿಂದ ರಾಜ್ಯದಲ್ಲಿ ಜಿಟಿಜಿಟಿ ಮಳೆ ಆರಂಭವಾಗಿತ್ತು. ಮಳೆ ಅಬ್ಬರ ಕಡಿಮೆಯಾಗಿದ್ದು, ಚಳಿ ಹೊಡೆತ ಜೋರಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!