ವಿಜಯಪುರದಲ್ಲಿ ಭಾರೀ ಮಳೆ: ಸಿಡಿಲು ಬಡಿದು ಮಹಿಳೆ, ಎಮ್ಮೆ ಸಾವು

ಹೊಸದಿಗಂತ ವರದಿ, ವಿಜಯಪುರ:

ಸಿಡಿಲು ಬಡಿದು ಮಹಿಳೆಯೊಬ್ಬಳು ಸಾವಿಗೀಡಾದ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹುಣಶ್ಯಾಳ ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ಜೈನಾಬಿ ನಜೀರಅಹ್ಮದ ಸಿಪಾಯಿ (55) ಸಿಡಿಲು ಬಡಿದು ಮೃತಪಟ್ಟ ಮಹಿಳೆ.

ಜೈನಾಬಿ ಸಿಪಾಯಿ, ಹೊಲದಲ್ಲಿ ಕಸ ತೆಗೆಯುವ ವೇಳೆ ಮಳೆ ಬಂದಿದ್ದು, ಮರದ ಕೆಳಗೆ ನಿಂತಿರುವ ವೇಳೆಯಲ್ಲಿ ಸಿಡಿಲು ಬಡಿದು ಸಾವನ್ನಪ್ಪಿದ್ದಾಳೆ.

ಈ ವೇಳೆ ಗಿಡದ ಪಕ್ಕದಲ್ಲಿದ ಎಮ್ಮೆಗೂ ಸಿಡಿಲು ತಾಗಿದ್ದು, ಎಮ್ಮೆ ಕೂಡ ಮೃತಪಟ್ಟಿದೆ.

ಕಲಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!