ಕರಾವಳಿಯಲ್ಲಿ ಭಾರೀ ಮಳೆ: ವಿದ್ಯುತ್ ಶಾಕ್ ಹೊಡೆದು ಸಹಾಯಕ ಪವರ್ ಮ್ಯಾನ್ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಮಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಇಂದು ಒಂದೇ ಕುಟುಂಬದ ಮೂವರು ಹಾಗೂ ಓರ್ವ ಬಾಲಕಿ ಸೇರಿದಂತೆ ನಾಲ್ವರು ಬಲಿಯಾಗಿದ್ದಾರೆ. ಇದೀಗ ಮಹಾ ಮಳೆಗೆ ವಿದ್ಯುತ್ ಪರಿವರ್ತಕದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಸಹಾಯಕ ಪವರ್ ಮ್ಯಾನ್ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

ಬೆಳ್ತಂಗಡಿ ಮೆಸ್ಕಾಂ ಉಪ ವಿಭಾಗದ ಕುವೆಟ್ಟು ಗ್ರಾಮದ ಅಮರಜಾಲು ಎಂಬಲ್ಲಿ ಪರಿವರ್ತಕದ ಫ್ಯೂಸ್ ಹಾಕಲು ಹೋಗಿದ್ದ ಸಹಾಯಕ ಪವರ್ ಮ್ಯಾನ್ ಓಡಿಲ್ನಾಳ ನಿವಾಸಿ ವಿಜೇಶ್ ಕುಮಾರ್ ಕೆ.(35) ಮೃತಪಟ್ಟವರು.

ಅವಿವಾಹಿತರಾಗಿದ್ದ ಅವರು ಕಳೆದ ಎಂಟು ವರ್ಷಗಳಿಂದ ಇಲಾಖೆಯಲ್ಲಿ ಸಹಾಯಕ ಪವರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಕೆಲಸ ನಿರ್ವಹಿಸುವುದಕ್ಕಾಗಿ ಜಿಒಎಸ್ ನಲ್ಲಿ ವಿದ್ಯುತ್ ಕಡಿತಗೊಳಿಸಿ ಅವರು ಪರಿವರ್ತಕದ ಮೇಲ್ಭಾಗಕ್ಕೆ ಹತ್ತಿ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಶಾಕ್ ಹೊಡೆದು ಸ್ಥಳದಲ್ಲೇ ಮೃತಪಟ್ಟರು. ಜಿಓಎಸ್ ನಲ್ಲಿ ಸರಿಯಾಗಿ ವಿದ್ಯುತ್ ಕಡಿತಗೊಳ್ಳದೆ ಇದ್ದಿದ್ದು ಘಟನೆಗೆ ಕಾರಣ ಎಂದು ಹೇಳಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!