ಕಾಸರಗೋಡನ್ನೂ ಕಂಗಾಲಾಗಿಸಿದ ಪುಷ್ಯ ಮಳೆ: ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿ ತಾಣಗಳಿಗೆ ಬೀಗ!

ಹೊಸದಿಗಂತ ಡಿಜಿಟಲ್: ಕಾಸರಗೋಡು ಜಿಲ್ಲೆಯಲ್ಲಿಯೂ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಪ್ರಾಕೃತಿಕ ವಿಕೋಪ ಸಂಭವಿಸದಂತೆ ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಲ್ಲೆಡೆ ವ್ಯಾಪಕ ಕಣ್ಗಾವಲು ಮುಂದುವರಿಸಿದ್ದು, ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೊಳಿಸಿದೆ. ಜಿಲ್ಲೆಯ ಪ್ರಸಿದ್ಧ ಗಿರಿಧಾಮ ರಾಣಿಪುರಂ ಸೇರಿದಂತೆ ಎಲ್ಲಾ ಪ್ರಮುಖ ಪ್ರವಾಸಿ ತಾಣಗಳಿಗೆ ಸಾರ್ವಜನಿಕರು ಹಾಗೂ ಪ್ರವಾಸಿಗರ ಪ್ರವೇಶವನ್ನು ಮುಂದಿನ ಆದೇಶದವರೆಗೆ ಸಂಪೂರ್ಣ ನಿಷೇಧಿಸಲಾಗಿದೆ. ಭಾರೀ ಮಳೆ ಹಾಗೂ ಭೂಕುಸಿತದ ಅಪಾಯವನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. … Continue reading ಕಾಸರಗೋಡನ್ನೂ ಕಂಗಾಲಾಗಿಸಿದ ಪುಷ್ಯ ಮಳೆ: ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿ ತಾಣಗಳಿಗೆ ಬೀಗ!