ಮುಸಲಧಾರೆಗೆ ತೆಲಂಗಾಣ ತತ್ತರ: 7 ಜಿಲ್ಲೆಗಳಿಗೆ ರೆಡ್ ಅಲರ್ಟ್, ತಗ್ಗುಪ್ರದೇಶಗಳು ಜಲಾವೃತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತೆಲಂಗಾಣ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಏಳು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಕೆಲ ಜಿಲ್ಲೆಗಳಲ್ಲಿ ಭಾನುವಾರ ರಾತ್ರಿಯಿಂದ ಆರಂಭವಾದ ಮಳೆ ಸೋಮವಾರವೂ ಮುಂದುವರಿದಿದೆ. ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹೈದರಾಬಾದ್ ಹವಾಮಾನ ಕೇಂದ್ರ ತಿಳಿಸಿದೆ.

ನಿಜಾಮಾಬಾದ್ ಜಿಲ್ಲೆಯ ಮೋಪಾಲ್ ಮಂಡಲದ ಮಂಚಿಪ್ಪದಲ್ಲಿ 15.7 ಸೆಂ.ಮೀ ಮಳೆಯಾಗಿದೆ. ರಾಜಣ್ಣಸಿರಿಸಿಲ್ಲ ಜಿಲ್ಲೆಯ ಇಲ್ಲಂತುಕ್ತ ಮಂಡಲದಲ್ಲಿ 15 ಸೆಂ.ಮೀ ಮಳೆ ದಾಖಲಾಗಿದೆ. ನಿಜಾಮಾಬಾದ್ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗಿದೆ. ರಂಗಾರೆಡ್ಡಿ ಮತ್ತು ಮೇದಕ್‌ನಲ್ಲಿಯೂ ಭಾರಿ ಮಳೆಯಾಗಿದೆ.

ಇಂದು (ಮಂಗಳವಾರ) ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಹವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ. 7 ಜಿಲ್ಲೆಗಳಿಗೆ ರೆಡ್ ಅಲರ್ಟ್, 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, 18 ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಹೈದರಾಬಾದ್, ರಂಗಾರೆಡ್ಡಿ, ಮೇದಕ್, ಮೇಡ್ಚಲ್ – ಮಲ್ಕಾಜಿಗಿರಿ, ಯಾದದ್ರಿ – ಭುವನಗಿರಿ, ಸಂಗಾರೆಡ್ಡಿ ಮತ್ತು ಸಿದ್ದಿಪೇಟ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ತಗ್ಗು ಪ್ರದೇಶಗಳು ಜಲಾವೃತವಾಗಿ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಈ ಹಿನ್ನೆಲೆಯಲ್ಲಿ ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್ (ಜಿಎಚ್‌ಎಂಸಿ) ಅಧಿಕಾರಿಗಳು ಹಾಗೂ ಸಿಬ್ಬಂದಿ ರಸ್ತೆಗಳಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!