ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ ಟೂರ್ನಿಯ ಎರಡನೇ ಸಮಿಫೈನಲ್ ಪಂದ್ಯಕ್ಕೆ ಮಳೆರಾಯ ಅಡ್ಡಿಯಾಗಿದ್ದಾನೆ. ಸದ್ಯ ಮಳೆ ನಿಂತಿದ್ದರೂ ಔಟ್ಫೀಲ್ಡ್ ಒದ್ದೆಯಾಗಿರುವುದರಿಂದ ಟಾಸ್ ಕೆಲಕಾಲ ತಡವಾಗಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಣ ಸೆಮಿಫೈನಲ್ ಪಂದ್ಯ ನಡೆಯಲಿದೆ.
ಪಂದ್ಯಕ್ಕೂ 2 ದಿನ ಮುನ್ನವೇ ಹವಾಮಾನ ಇಲಾಖೆ ಪಂದ್ಯಕ್ಕೆ ಶೇ.88ರಷ್ಟು ಮಳೆ ಎಚ್ಚರಿಕೆ ನೀಡಿತ್ತು. ಜತೆಗೆ ಪಂದ್ಯ ನಡೆಯುವುದು ಕೂಡ ಅನುಮಾನ ಎಂದು ತನ್ನ ವರದಿಯಲ್ಲಿ ತಿಳಿಸಿತ್ತು. ಇದೀಗ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ.
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಎರಡನೇ ಸೆಮಿಫೈನಲ್ ಕದನವು ಟೀಂ ಇಂಡಿಯಾ ಪಾಲಿಗೆ ರಿವೇಂಜ್ ಮ್ಯಾಚ್ ಎನಿಸಿಕೊಂಡಿದೆ.
ಗಯಾನಾದಲ್ಲಿ ಬುಧವಾರ ಮಳೆ ಮುನ್ಸೂಚನೆ ಇದ್ದು, ಭಾರತ-ಇಂಗ್ಲೆಂಡ್ ಪಂದ್ಯಕ್ಕೂ ಅಡ್ಡಿಪಡಿಸುವ ಸಾಧ್ಯತೆ ಹೆಚ್ಚಿದೆ. ಆದರೆ ಪಂದ್ಯಕ್ಕೆ ಮೀಸಲು ದಿನ ಇಲ್ಲ. ಇದು ಬೆಳಗ್ಗಿನ ಪಂದ್ಯವಾಗಿದ್ದು, ಹೀಗಾಗಿ ಪಂದ್ಯ ಮುಕ್ತಾಯಗೊಳಿಸಲು ಹೆಚ್ಚುವರಿ 250 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ಅದರಲ್ಲೂ ಫಲಿತಾಂಶ ಸಾಧ್ಯವಾಗದೆ ಇದ್ದರೆ, ಸೂಪರ್-8 ಹಂತದ ಗುಂಪು-1ರಲ್ಲಿ ಅಗ್ರಸ್ಥಾನ ಪಡೆದ ಭಾರತ ಫೈನಲ್ಗೇರಲಿದೆ. ಗುಂಪು-2ರಲ್ಲಿದ್ದ ಇಂಗ್ಲೆಂಡ್ 2ನೇ ಸ್ಥಾನಿಯಾಗಿ ಸೆಮಿಫೈನಲ್ ಪ್ರವೇಶಿಸಿತ್ತು.