ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕೊಕ್ಕರೆ ಬೆಳ್ಳೂರಿನಲ್ಲಿ ಮಾತ್ರ ಕಾಣಸಿಗುವ ಹೆಜ್ಜಾರ್ಲೆ ಪಕ್ಷಿಗಳ ಸಾವಿನಲ್ಲಿ ಗಣನೀಯ ಏರಿಕೆ ಕಾಣಿಸುತ್ತಿದ್ದು, ಅನಾರೋಗ್ಯದಿಂದ ಹೆಜ್ಜಾರ್ಲೆ ಪಕ್ಷಿಯೊಂದು ಮೃತಪಟ್ಟಿದೆ.
ಮದ್ದೂರಿನ ಕೊಕ್ಕರೆ ಬೆಳ್ಳೂರಿನಲ್ಲಿ ವಿದೇಶದಿಂದ ಬಂದ ಪಕ್ಷಿಗಳು ನೆಲೆ ಬಿಟ್ಟಿದ್ದವು. ಅನಾರೋಗ್ಯದಿಂದ ಪಕ್ಷಿ ಮೃತಪಟ್ಟಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಅಧಿಕಾರಿಗಳು ಮರಣೋತ್ತರ ಪರೀಕ್ಷೆಗೆ ಸಿದ್ಧತೆ ನಡೆಸಿದ್ದು, ಸಾವಿಗೆ ನಿಖರ ಕಾರಣ ತಿಳಿದು ಮುಂಜಾಗ್ರತೆ ವಹಿಸಲಿದ್ದಾರೆ.
ಬೆಳ್ಳೂರಿನಲ್ಲಿ ಮಾತ್ರ ಕಾಣಸಿಗುವ ಹೆಜ್ಜಾರ್ಲೆ ಪಕ್ಷಿಗಳ ಸಾವಿನ ಸಂಖ್ಯೆ ಏರುತ್ತಲೇ ಇದ್ದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.