ಸರ್ವೆಗೆ ತೆರಳಿದ್ದವರ ಮೇಲೆ ಹೆಜ್ಜೇನು ದಾಳಿ: ಇಬ್ಬರು ಗಂಭೀರ

ಹೊಸದಿಗಂತ ವರದಿ,ಮಡಿಕೇರಿ:

ಸರ್ವೆ ಕಾರ್ಯಕ್ಕೆ ತೆರಳಿದ್ದ ಕಂದಾಯ ಇಲಾಖೆಯ ಅಧಿಕಾರಿಗಳ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ಶನಿವಾರಸಂತೆ ಬಳಿಯ ಹಂಡ್ಲಿ ಗ್ರಾಮದಿಂದ ವರದಿಯಾಗಿದೆ.

ಕೊಡ್ಲಿಪೇಟೆ ಹೋಬಳಿಯ ಹಂಡ್ಲಿ ಪಂಚಾಯತ್ ವ್ಯಾಪ್ತಿಯ ಬೆಳ್ಳಾರಳ್ಳಿ ಗ್ರಾಮದಲ್ಲಿ ಕೆರೆ ಸರ್ವೆ ಮಾಡುವ ಕರ್ತವ್ಯದ ನಿಮಿತ್ತ ಸರ್ವೆಯರ್ ಮಾದೇಗೌಡ ಮತ್ತು ಸಹಾಯಕ ಸಂತೋಷ್, ಹಂಡ್ಲಿ ವೃತ್ತದ ಗ್ರಾಮ ಆಡಳಿತಾಧಿಕಾರಿ ಶ್ವೇತಾಶ್ರಿ, ಗ್ರಾಮ ಸಹಾಯಕ ರಾಜು ತೆರಳಿದ್ದರು.

ಈ ಸಂದರ್ಭ ಇವರುಗಳ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಗಂಭೀರ ಸ್ಥಿತಿಯಲ್ಲಿರುವ ಹಂಡ್ಲಿ ವೃತ್ತದ ಗ್ರಾಮ ಆಡಳಿತಾಧಿಕಾರಿ ಶ್ವೇತಾಶ್ರಿ‌ ಅವರನ್ನು ಹಾಸನದ ಆಸ್ಪತ್ರೆಗೆ ಮತ್ತು ಸರ್ವೆಯರ್ ಮಾದೇಗೌಡರ ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂತೋಷ್‌ ಹಾಗೂ ರಾಜು ಅವರುಗಳಿಗೂ ಸಣ್ಣಪುಟ್ಟ ಗಾಯಗಳಾಗಿರುವುದಾಗಿ ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!