July 30, 2026
Thursday, July 30, 2026
spot_img

ಯುಪಿ ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಖನೌದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲಿ ಭೂಸ್ಪರ್ಶ ಮಾಡಿದೆ.

ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಇತ್ತು, ಅದರಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಮೌರ್ಯ ಅವರ ಆಪ್ತ ಬಿಜೆಪಿ ನಾಯಕರೊಬ್ಬರ ಪ್ರಕಾರ, ಉಪಮುಖ್ಯಮಂತ್ರಿಗಳು ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೆಲಿಕಾಪ್ಟರ್ ಮೂಲಕ ಕೌಶಂಬಿಗೆ ಹೋಗುತ್ತಿದ್ದರು ಎಂದು ತಿಳಿದುಬಂದಿದೆ.

ಮೌರ್ಯ, ಅವರ ಸಹಾಯಕ ವಿವೇಕ್ ಮತ್ತು ಇಬ್ಬರು ಪೈಲಟ್‌ಗಳು ಸೇರಿದಂತೆ ಐದು ಜನರಿಂದ ಹೆಲಿಕಾಪ್ಟರ್ ಲಖನೌನ ಲಾ ಮಾರ್ಟಿನಿಯರ್ ಕಾಲೇಜು ಮೈದಾನದ ಹೆಲಿಪ್ಯಾಡ್‌ನಿಂದ ಟೇಕ್ ಆಫ್ ಆಗಿದೆ. ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !