ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಪೈಲೆಟ್ ಸಹಿತ ಆರು ಮಂದಿ ಪಾರು

ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್, ಟೇಕ್ ಆಫ್ ವೇಳೆ ಉಂಟಾದ ತಾಂತ್ರಿಕ ದೋಷದಿಂದ ಹೆದ್ದಾರಿಯಲ್ಲೇ ತುರ್ತು ಭೂಸ್ಪರ್ಶ ಮಾಡಿದ ಘಟನೆ ಉತ್ತರಾಖಂಡದ ರುದ್ರಪ್ರಯಾಗದಲ್ಲಿ ನಡೆದಿದೆ.
ಕ್ರೆಸ್ಟೆಲ್ ವಿಮಾನಯಾನ ಸಂಸ್ಥೆಗೆ ಸೇರಿದ ಈ ಹೆಲಿಕಾಪ್ಟರ್, ರುದ್ರಪ್ರಯಾಗ ಜಿಲ್ಲೆಯ ಬಡಾಸು ಪ್ರದೇಶದ ಹೆಲಿಪ್ಯಾಡ್‌ನಿಂದ ಹೊರಟಿತ್ತು. ಹೆಲಿಕಾಪ್ಟರ್‌ನಲ್ಲಿ ಪೈಲೆಟ್ ಸಹಿತ ಆರು ಮಂದಿ ಪ್ರಯಾಣಿಸುತ್ತಿದ್ದರು. ಪೈಲೆಟ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದವರಿಗೆ ಯಾವುದೇ ಅಪಾಯವಾಗಿಲ್ಲ. ತುರ್ತು ಭೂಸ್ಪರ್ಶದ ವೇಳೆ ಹೆಲಿಕಾಪ್ಟರ್‌ನ ಹಿಂಭಾಗ ಕಾರಿಗೆ ತಾಗಿದ್ದು, ಕಾರು ಜಖಂಗೊಂಡಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!