‘ಆಪರೇಷನ್‌ ಸಿಂಧೂರ’ ಎಫೆಕ್ಟ್ ರಾಜ್ಯದ ಕರಾವಳಿಯಲ್ಲಿ ಹೈಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತ ‘ಆಪರೇಷನ್ ಸಿಂಧೂರ’ ಬೆನ್ನಲ್ಲೇ ರಾಜ್ಯದ ಕರಾವಳಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

ಕಾರವಾರದಲ್ಲಿ ಕದಂಬ ನೌಕಾ ನೆಲೆ ಹಾಗೂ ಬಂದರಿನಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಬಂದರಿಗೆ ಬರುವ ಅನ್ಯ ದೇಶದ ಹಡುಗುಗಳಲ್ಲಿ ಚೀನಾ, ಪಾಕಿಸ್ತಾನದ ಸಿಬ್ಬಂದಿಯಿದ್ದರೂ ನಿರ್ಬಂಧ ವಿಧಿಸಲಾಗಿದೆ.

ಮಂಗಳೂರಿನ ಕಡಲ ತೀರದಲ್ಲಿ ಕರಾವಳಿ ಕಾವಲು ಪಡೆಯಿಂದ ಕಟ್ಟೆಚ್ಚರ ವಹಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ತೀವ್ರ ನಿಗಾ ವಹಿಸಿರುವ ಕರಾವಳಿ ಕಾವಲು ಪಡೆ ಪೊಲೀಸರು ಮಂಗಳೂರಿನ ಬಂದರು ಕಡಲ ತೀರದಲ್ಲಿ ಪರಿಶೀಲನೆ ನಡೆಸಿದ್ದಾರೆ.

12 ನಾಟಿಕನ್ ಮೈಲೂ ದೂರದಿಂದ ಹೊರ ಹೋಗದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದ್ದು, ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!